ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

ರಿಪ್ಪನ್‌ಪೇಟೆ: ಕೆರೆಹಳ್ಳಿ ಹೋಬಳಿಯ ಗವಟೂರು ಗ್ರಾಮದ ಸರ್ವೇ ನಂ. 260/2ರಲ್ಲಿ 2 ಎಕರೆ 5 ಗುಂಟೆ ಪ್ರದೇಶವನ್ನು 1991-92ನೇ ಸಾಲಿನಲ್ಲಿ 23 ಮಂದಿ ಫಲಾನುಭವಿಗಳಿಗೆ ಆಶ್ರಯ ನಿವೇಶನಗಳಿಗಾಗಿ ಮಂಜೂರು ಮಾಡಲಾಗಿತ್ತು. ಆದರೆ ಹಲವು ವರ್ಷಗಳಾದರೂ ಬಡಾವಣೆ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾರ್ಯಗಳು ಆರಂಭವಾಗದೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ, ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳುವಂತೆ ಒತ್ತಾಯಿಸಿ ಹೋರಾಟಗಾರರು ಪಟ್ಟಣದ ನಾಡಕಚೇರಿಯಲ್ಲಿ ಉಪ ತಹಶೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಕುರಿತು ಮಾನ್ಯ ಕಂದಾಯ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗಳು ಭೂಮಿಯನ್ನು ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಗೆ ಹಸ್ತಾಂತರಿಸಿ ಅಭಿವೃದ್ಧಿಪಡಿಸಲು ಈಗಾಗಲೇ ಆದೇಶ ನೀಡಿದ್ದರು. ಅದರಂತೆ ಹೊಸನಗರ ತಹಶೀಲ್ದಾರ್ ಅವರು ಮೇ 5, 2026ರಂದು ಕೆರೆಹಳ್ಳಿ ರಾಜಸ್ವ ನಿರೀಕ್ಷಕರಿಗೆ ಖಾಸಗಿ ವ್ಯಕ್ತಿಗಳ ಅನಧಿಕೃತ ಒತ್ತುವರಿಯನ್ನು ತೆರವುಗೊಳಿಸಿ, ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆದು ವರದಿ ಸಲ್ಲಿಸುವಂತೆ ಸೂಚಿಸಿದ್ದರು.

ಆದರೆ ಇದುವರೆಗೆ ಸಂಪೂರ್ಣ ಒತ್ತುವರಿ ತೆರವು ಕಾರ್ಯ ನಡೆಯದಿರುವುದರಿಂದ ಸ್ಥಳೀಯರು ಹಾಗೂ ಫಲಾನುಭವಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಸರ್ಕಾರ ಅಗತ್ಯ ಕ್ರಮ ಕೈಗೊಂಡು ಭೂಮಿಯನ್ನು ತೆರವುಗೊಳಿಸಿ ಆಶ್ರಯ ಬಡಾವಣೆ ನಿರ್ಮಾಣದ ಜೊತೆಗೆ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ವರದರಾಜ್, ಸ್ಥಳೀಯ ಮುಖಂಡ ಶೇಖರಪ್ಪ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ರಿಪ್ಪನ್‌ಪೇಟೆ ಸಮೀಪ ಕಾರು ನಾಲ್ಕು ಬಾರಿ ಪಲ್ಟಿ: ಮೂವರಿಗೆ ಗಂಭೀರ ಗಾಯ:-

    ರಿಪ್ಪನ್‌ಪೇಟೆ ಸಮೀಪ ಕಾರು ನಾಲ್ಕು ಬಾರಿ ಪಲ್ಟಿ: ಮೂವರಿಗೆ ಗಂಭೀರ ಗಾಯ ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಶೆಟ್ಟಿಬೀಡು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಾಲ್ಕು ಬಾರಿ ಪಲ್ಟಿಯಾದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಸುಗುಂಡಿ…

    Continue reading
    ಕಾಡಿನಲ್ಲೇ ಅಕ್ರಮ ತೂರಬಿಲ್ಲೆ ಜೂಜಾಟಕ್ಕೆ ಪೊಲೀಸರ ಬ್ರೇಕ್: ಮೂವರು ಬಂಧನ

    ಕಾಡಿನಲ್ಲೇ ಅಕ್ರಮ ತೂರಬಿಲ್ಲೆ ಜೂಜಾಟಕ್ಕೆ ಪೊಲೀಸರ ಬ್ರೇಕ್: ಮೂವರು ಬಂಧನ ಆನಂದಪುರ, ಜು.13: ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಸಿರುವ ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ, ಕಾಡಿನ ಮಧ್ಯೆ ನಡೆಯುತ್ತಿದ್ದ ಅಕ್ರಮ ತೂರಬಿಲ್ಲೆ ಜೂಜಾಟದ ಮೇಲೆ…

    Continue reading

    You Missed

    ರಿಪ್ಪನ್‌ಪೇಟೆ ಸಮೀಪ ಕಾರು ನಾಲ್ಕು ಬಾರಿ ಪಲ್ಟಿ: ಮೂವರಿಗೆ ಗಂಭೀರ ಗಾಯ:-

    ರಿಪ್ಪನ್‌ಪೇಟೆ ಸಮೀಪ ಕಾರು ನಾಲ್ಕು ಬಾರಿ ಪಲ್ಟಿ: ಮೂವರಿಗೆ ಗಂಭೀರ ಗಾಯ:-

    ಕಾಡಿನಲ್ಲೇ ಅಕ್ರಮ ತೂರಬಿಲ್ಲೆ ಜೂಜಾಟಕ್ಕೆ ಪೊಲೀಸರ ಬ್ರೇಕ್: ಮೂವರು ಬಂಧನ

    ಕಾಡಿನಲ್ಲೇ ಅಕ್ರಮ ತೂರಬಿಲ್ಲೆ ಜೂಜಾಟಕ್ಕೆ ಪೊಲೀಸರ ಬ್ರೇಕ್: ಮೂವರು ಬಂಧನ

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಸವಯವ ಕೃಷಿ ಹಾಗೂ ಅಡಿಕೆ ರೋಗ ನಿಯಂತ್ರಣ ಕಾರ್ಯಾಗಾರ:-

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹೊಸನಗರ ಪಟಗುಪ್ಪ : ಸೇತುವೆ ಬಳಿ ಗೋವು ಹತ್ಯಪ್ರಕರಣ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಹಸಿದವರಿಗೆ ಅನ್ನದಾನ ಕಾರ್ಯಕ್ರಮ : ಶಿವಮೊಗ್ಗ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ

    ಆಶ್ರಯ ನಿವೇಶನ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಸೌಲಭ್ಯ ಕಲ್ಪಿಸಲು ಮನವಿ