
ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘ. ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಸಹಕಾರ ಸಂಘ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಧರ್ಮ ಪರ್ವ ಸಮಾಜ ಸೇವಾ ಟ್ರಸ್ಟ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ ಎಂಟರ ಭಾನುವಾರ,
ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶ್ರೀಮತಿ ಬಿ ವರಲಕ್ಷ್ಮಿ ಪ್ರಕಾಶ್ ಇವರನ್ನು ಸಾಮಾಜಿಕ ಕ್ಷೇತ್ರದ ಸೇವೆಗಾಗಿ ಅತ್ಯುತ್ತಮ ಮಹಿಳಾ ಸಾಧಕಿ ಎಂದು ಪರಿಗಣಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವೆ ಲೀಲಾದೇವಿ ಆರ್ ಪ್ರಸಾದ್ ಇವರು ಸನ್ಮಾನಿಸಿದರು.
ಸಮಾಜದಲ್ಲಿ ತಮ್ಮದೇ ಆಗಿರುವ ಮಹಿಳೆಯರ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಕಷ್ಟ ನೋವುಗಳ ಜೊತೆಗೆ ಎಷ್ಟೇ ಕೆಲಸ ಕಾರ್ಯಗಳಿದ್ದರೂ ಕೂಡ ತಮ್ಮ ಜೀವನದ ಒಂದು ಭಾಗವನ್ನು ಸಮಾಜದ ಸೇವೆಗೆಂದು ಮುಡುಪಾಗಿಟ್ಟು ಎಷ್ಟು ಹೆಣ್ಣುಮಕ್ಕಳಿಗೂ ಕೂಡ ದಾರಿ ದೀಪವಾಗಿದ್ದು ಹಾಗೂ ಸಮಾಜದಲ್ಲಿ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ ಮಾಡಿ, ತಮ್ಮ ಜೀವನವನ್ನು ಮುಡುಪಾಗಿಟ್ಟಿರುವ ಶ್ರೀಮತಿ ವರಲಕ್ಷ್ಮಿ ಪ್ರಕಾಶ್ ಇವರಿಗೆ ಮೇಲ್ಕಂಡ ಸಂಸ್ಥೆಯವರು ಇವರನ್ನ ಗುರುತಿಸಿ ಮಹಿಳಾ ದಿನಾಚಾರಣೆ ಪ್ರಯುಕ್ತವಾಗಿ ಅವರಿಗೆ ಗುರುತಿಸಿ ಸನ್ಮಾನಿಸಲಾಯಿತು.







