* ಬೊಮ್ಮನಕಟ್ಟೆ ಪಾರ್ಟಿ ವೇಳೆ ಜಗಳವಾಡಿ ಕೊಲೆಯಲ್ಲಿ ಅಂತ್ಯ*
ಶಿವಮೊಗ್ಗ ಜಿಲ್ಲೆಯ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಗೆಳೆಯರ ನಡುವೆ ನಡೆದ ಎಣ್ಣೆ ಪಾರ್ಟಿ ಮಾಡಿಕೊಂಡು ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ.
ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಒಬ್ಬ ಯುವಕನ ಸವಾಗಿದೆ.
ಶಿವಮೊಗ್ಗದ ಬೊಮ್ಮನಕಟ್ಟೆಯ ಈ ಬ್ಲಾಕ್ ನಲ್ಲಿ ಈ ಘಟನೆ ನಡೆದಿದ್ದು, ಬೊಮ್ಮನಕಟ್ಟೆ ಏ ಬ್ಲಾಕ್ ನಿವಾಸಿಯಾಗಿರುವ ಪವನ್ ತನ್ನ ಗೆಳೆಯ ಶಿವಕುಮಾರ್ ಅವರ ಮನೆಗೆ ರಾತ್ರಿ ಪಾರ್ಟಿಗೆ ಹೋಗಿದ್ದು ಪಾರ್ಟಿ ನಡೆಯುವ ಸಂದರ್ಭದಲ್ಲಿ ಗೆಳೆಯರ ಮಾತು ಮಾತಿಗೆ ಬೆಳೆದು ಜಗಳ ತುಂಬಾ ದೊಡ್ಡ ಮಟ್ಟಕ್ಕೆ ಹೋಗಿದ್ದು ಈ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಈ ಸಂದರ್ಭದಲ್ಲಿ ಶಿವ್ಕುಮಾರ್ ಮನೆಯಲ್ಲಿ ಪವನ್ ಸಾವನ್ನಪ್ಪಿದ್ದಾರೆ. ಪೊಲೀಸ್ ಘಟನೆ ನಡೆದ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ ನಂತರ ಶಿವಕುಮಾರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಪಟ್ಟಂತೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಘಟನೆಗೆ ಕಾರಣವಾಗಿರುವ ವಿಚಾರಧಾರೆಗಳನ್ನು ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.