ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ಹೊಸನಗರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ|

ತಾಲೂಕು ಕಚೇರಿ ಆವರಣದಲ್ಲಿ ನಡೆದ ಬಿಜೆಪಿ ಮಂಡಲ ಶನಿವಾರ ಕೈಗೊಂಡ ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ,

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಯಾಗಿದ್ದ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣವಾಗಿ ಹಿನ್ನಡೆ ಕಂಡು ಬಂದಿದೆ. ಹೊಸನಗರ ತಾಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗಂಬೆಯಾಗಿ ಕೆಲಸ ಮಾಡುತ್ತಿದ್ದು ಬಡವರಿಗೆ, ರೈತರಿಗೆ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ ಎಂದು ಮನದಾಳದ ನೋವನ್ನು ನೋಡಿಕೊಂಡಿದ್ದಾರೆ. ತಾಲೂಕು ಕಚೇರಿಯ ಅವಣದಲ್ಲಿ ಬಿಜೆಪಿ ಮಂಡಲ ಪ್ರತಿಭಟನೆ ನಡೆಸಿ, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಅಭಿವೃದ್ಧಿಯ ವಿಷಯದಲ್ಲಿ ಎಡವಿದ್ದಾರೆ ಬಡವರ ಹಾಗೂ ರೈತರ ಪರ ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದಾರೆ ಹಾಗೂ ರೈತರ ಬಗರಕುಂ ಸಾಗುವಳಿ ಜಮೀನು ತೆರವುಗೊಳಿಸಿದಷ್ಟೇ ಇಲ್ಲಿವರೆಗಿನ ಸಾಧನೆ ಆಗಿದೆ.  ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ ಎಂದು ಆಪಾದಿಸಿದರು.

ಸ್ಥಳೀಯ ಶಾಸಕರು ಅಧಿಕಾರಿ ವರ್ಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಕೆಲ ಅಧಿಕಾರಿಗಳು ಸಹ ಶಾಸಕರ ಹೇಳಿದಂತೆ ವರ್ತಿಸುತ್ತಿದ್ದಾರೆ. ಇದು ಆಡಳಿತದ ವೈಫಲ್ಯಕ್ಕೆ ಕಾರಣವಾಗಿದೆ.

ಆರ್. ಎಸ್. ಎಸ್ ವಿರುದ್ಧ ಬೇಲೂರು ಗೋಪಾಲಕೃಷ್ಣ ( ಬ್ರಿಟಿಷರನ್ನೇ ಓಡಿಸಿದ ಈ ನಮ್ಮ ಕಾಂಗ್ರೆಸ್ ಪಕ್ಷವು ಆರ್. ಎಸ್. ಎಸ್  ಯಾವ ಲೆಕ್ಕ) ಇವರು ಹತ್ತು ವರ್ಷದ ಹಿಂದೇನೆ ಆರ್ ಎಸ್ ಎಸ್ ಚಡ್ಡಿ ಹಾಕಿಕೊಂಡು ಬಿಜೆಪಿಯಿಂದನೇ ಶಾಸಕರಾದವರು ಅದನ್ನು ಮರೆತಂತೆ ಕಾಣುತ್ತಿದೆ, ಆರ್ ಎಸ್ ಎಸ್ ಅನ್ನು ಭಾರತ ದೇಶದಿಂದ ಓಡಿಸಲು ಇವರಿಂದ ಸಾಧ್ಯವಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಮಾತನಾಡಿದರು.

ತಹಸಿಲ್ದಾರ್ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ, ವಿವಿಧ ಇಲಾಖೆಯ ಇಂಜಿನಿಯರ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಹುದ್ದೆಗಳು ಹಾಗೆ ಖಾಲಿ ಉಳಿದಿವೆ. ಹಳ್ಳಿಯಿಂದ ಬಂದ ಜನಸಾಮಾನ್ಯರು ಅವರ ಅಹವಾಲು ಸಲ್ಲಿಸಲು ಕಚೇರಿಗೆ ಬಂದರೆ ಯಾರು ಕೇಳುವಂತವರಿಲ್ಲ.ತಾಲೂಕಿನ ಬಹುತೇಕ ರಸ್ತೆಗಳು ಕೂಡ ಹೋಂಡಾ ಬಿದ್ದರೂ  ಮುಚ್ಚುವವರಿಲ್ಲ ದಂತಹ ಸ್ಥಿತಿಯಾಗಿದೆ ಮೊದಲು ಅಭಿವೃದ್ಧಿಯ ಕಡೆಗೆ ಗಮನಹರಿಸಲಿ ಎಂದರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಎನ್ ಆರ್ ದೇವನಂದ. ಉಮೇಶ್ ಕಂಚುಗಾರ್. ಹಾಲ್ಗದ್ದೆ ಉಮೇಶ್. ಎನ್ ಶ್ರೀಧರ ಉಡುಪ. ವೀರೇಶ್ ಆಲವಳ್ಳಿ. ಆರ್ ಟಿ ಗೋಪಾಲ. ಸುರೇಶ್ ಸ್ವಾಮಿರಾವ್. ನಾಗರ್ಜುನ ಸ್ವಾಮಿ. ಸತ್ಯನಾರಾಯಣ. ಚಾಲುಕ್ಯ ಬಸವರಾಜ್ ಚಾಲುಕ್ಯ ಬಸವರಾಜ್. ಶ್ರೀಪತಿರಾವ್ ಮಂಡನಿ ಮೋಹನ್ ಅಭಿಲಾಶ್ ಮಂಜುನಾಥ್ ಸಂಜೀವ. ಸುರೇಶ್ ಬಂಕ್ರಿ ಬಿಡು ಮಂಜುನಾಥ, ಪುರುಷೋತ್ತಮ ಶಾನುಭೋಗ್, ನರಲೇ ರಮೇಶ್ ಮಾವಿನಕಾಯಿಪ್ಪ ಗೌತಮ್ ಮಹೇಂದ್ರ.

ಮಹಿಳಾ ಮೋರ್ಚಾದ ಮಹಿಳೆಯರು ಕೂಡ ಪಾಲ್ಗೊಂಡಿದ್ದು, ನಾಗರತ್ನ ದೇವರಾಜ್, ಶಶಿಕಲಾ ಸುಮಾ ಸುರೇಶ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಟಿ ನಾಗರತ್ನಮ್ಮ ತಾಲೂಕು ಉಪಾಧ್ಯಕ್ಷರಾದ ಮಂಜುಳಾ ಕೇತರ್ಜಿ, ಪದ್ಮ ಸುರೇಶ್ , ನಿರ್ಮಲ, ಸೀತಮ್ಮ, ಗೀತಾ ಕರಿಬಸಪ್ಪ, ಅಶ್ವಿನಿ ರವಿಶಂಕರ್, ರೇಖಾ, ಆಶಾ ರವೀಂದ್ರ, ಸುಗುಣ. ಹಾಜರಿದ್ದರು.

 

  • PublicTimes Karnataka

    ಪಬ್ಲಿಕ್ ಟೈಮ್ ಕರ್ನಾಟಕ ನೈಜ ನೇರ ಸುದ್ದಿಗಾಗಿ *ಪ್ರಸ್ತುತ ರಾಜಕೀಯ *ಸಾಮಾಜಿಕ ಹೋರಾಟ * ಕಾನೂನು ನೆರವು * ಕ್ರೀಡೆ * ಕ್ರೈಂ * ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ಕರ್ನಾಟಕದ ಯಾವುದೇ ಮೂಲೆಯಲ್ಲಿ ನಡೆಯುವಂತಹ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನಿಮ್ಮ ಮುಂದಿಡುತ್ತೇವೆ. ನಿಷ್ಪಕ್ಷಪಾತ ಮಾಡದೆ ನೇರ ಮತ್ತು ನೈಜ ಸುದ್ದಿಗಳನ್ನು ನಿಮ್ಮ ಮುಂದಿಡುತ್ತೇವೆ

    Related Posts

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು   ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಮದೀನಾ ಕಾಲೋನಿ ನಿವಾಸಿ ಮಹಮ್ಮದ್…

    Continue reading
    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ   ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ನೆಲೆಸಿರುವ ಸಕಲ ಇಷ್ಟಾರ್ಥ ಪ್ರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವವು ಇದೇ ಬರುವ ಏಪ್ರಿಲ್…

    Continue reading

    You Missed

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್ ಪೇಟೆಯಲ್ಲಿ ದುರ್ಘಟನೆ: SSLC ವಿದ್ಯಾರ್ಥಿ ಕೆರೆಗೆ ಬಿದ್ದು ಸಾವು

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ರಿಪ್ಪನ್‌ಪೇಟೆಯ ವಿನಾಯಕ ನಗರದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಏಪ್ರಿಲ್.5, 6ರಂದು ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಹೊಸನಗರದಲ್ಲಿ ಬೃಹತ್ ಪಾದಯಾತ್ರೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ತುಮಕೂರು ಕೆ.ಬಿ. ಕ್ರಾಸ್ ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲದೆ ಬಯಲೇ ಗತಿ!

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.

    ಸಾಗರ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಪರಿಹರಿಸಿ: ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಕೆ.